ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ, ಮೈದಾನದಿಂದ ಹೊರಗೆ ಬರುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಗಣೇಶ ಪೆಂಡಾಲ್ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.
ಪಾಲಿಕೆ ವಲಯಾಧಿಕಾರಿ ಬಸವರಾಜ ಲಮಾಣಿ ನೇತೃತ್ವದಲ್ಲಿ, 30ಕ್ಕೂ ಹೆಚ್ಚು ಸಿಬ್ಬಂದಿ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ.
ಈದ್ಗಾ ಮೈದಾನದಲ್ಲಿ ಷರತ್ತಿನ ಮೇರೆಗೆ ಪಾಲಿಕೆ ಗಣೇಶೋತ್ಸವಕ್ಕೆ ಅನುಮತಿ ನೀಡಿತ್ತು. ಸೆ. 2ರಂದು ಮಧ್ಯಾಹ್ನ 12ರವರೆಗೆ ಮಾತ್ರ ಮೈದಾನದಲ್ಲಿ ಉತ್ಸವಕ್ಕೆ ಅವಕಾಶ ಕಲ್ಪಿಸಲಾಗಿತ್ತು. 11.45 ಆರ್.ಎಸ್.ಎಸ್.ನ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೆಂಡೆ, ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಧರ ನಾಡಗೇರ ವಿಶೇಷ ಪೂಜೆ ನೆರವೇರಿಸಿ ವಿಸರ್ಜನೆಗೆ ಚಾಲನೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.