ADVERTISEMENT

ಕುಂದಗೋಳ: ಇಟ್ಟಿಗೆಯಿಂದ ಹೊಡೆದು ವೃದ್ಧನ ಕೊಲೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 5:13 IST
Last Updated 12 ಆಗಸ್ಟ್ 2025, 5:13 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಕುಂದಗೋಳ: ವಯೋವೃದ್ಧ ದಂಪತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿದ ಮೂರನೇ ವ್ಯಕ್ತಿಯೊಬ್ಬರು ವೃದ್ಧನ ಮೇಲೆ ಈಚೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಚಿಕಿತ್ಸೆಗಾಗಿ  ಹುಬ್ಬಳ್ಳಿಯ ಕಿಮ್ಸ್‌ ಆಸ್ಪ‍ತ್ರೆಗೆ ದಾಖಲಿಸಿದರೂ ಗಾಯಾಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಡಪಟ್ಟಿ ಗ್ರಾಮದಲ್ಲಿ ನಡೆದಿದೆ.

ADVERTISEMENT

ರುದ್ರಪ್ಪ ಚನ್ನಪ್ಪ ಅವಾರಿ (70) ಮೃತ ವ್ಯಕ್ತಿ. ರುದ್ರಪ್ಪ ಪತ್ನಿಯೊಂದಿಗೆ ಜಗಳವಾಡುವಾಗ ಮಧ್ಯಪ್ರವೇಶಿಸಿದ ಪ್ರಶಾಂತ ಅವಾರಿ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಂದಗೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.