ಹುಬ್ಬಳ್ಳಿ: ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ನಗರದ ಮಹಿಳೆಗೆ ಬೆದರಿಸಿ, ₹25 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಸಿದ್ಧೇಶ್ವರ ಪಾರ್ಕ್ನ ಉದ್ಯಮಿ ಮಹಿಳೆಗೆ ಉತ್ತರ ಪ್ರದೇಶ ಗೋರಖಪುರದಲ್ಲಿರುವ ಬೆಳಗಾವಿ ಮೂಲದ ನಿವಾಸಿ ಜಿತೇಂದ್ರ ಪಿಸೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಾರೆ.
ಜಿತೇಂದ್ರ ಎರಡು ತಿಂಗಳ ಹಿಂದೆ ಆ ಮಹಿಳೆಗೆ ಕರೆ ಮಾಡಿ ಹಣ ನೀಡುವಂತೆ ಪೀಡಿಸಿದ್ದ. ಇದಕ್ಕೆ ಒಪ್ಪದಿದ್ದಾಗ, ‘ತನ್ನೊಂದಿಗೆ ಅನೈತಿಕ ಸಂಬಂಧವಿದೆ ಎಂದು ಪತಿ ಮತ್ತು ಸಂಬಂಧಿಕರಿಗೆ ಹೇಳಿ ಕೌಟುಂಬಿಕ ಸಂಬಂಧ ಹಾಳು ಮಾಡುವೆ. ನಿಮ್ಮ ಮಗಳ ಜೀವ ತೆಗೆಯುವೆ. ಇದನ್ನು ತಪ್ಪಿಸಲು ಹಣ ನೀಡಬೇಕು’ ಎಂದು ಬೇಡಿಕೆ ಇಟ್ಟಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.