ADVERTISEMENT

ಖೊಟ್ಟಿ ದಾಖಲೆ ನೀಡಿ ಪ್ರಮಾಣ ಪತ್ರ, ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 7:51 IST
Last Updated 25 ಫೆಬ್ರುವರಿ 2020, 7:51 IST

ಹುಬ್ಬಳ್ಳಿ: ಖೊಟ್ಟಿ ದಾಖಲೆಗಳನ್ನು ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದ ಬೈರಿದೇವರಕೊಪ್ಪದ ರೇಣುಕಾ ಕಾಲೊನಿ ನಿವಾಸಿ ಶಿವಾಜಿ ಅತ್ತರವಾಲೆ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ರಜಪೂರ 2ಎ ವರ್ಗದ ಜಾತಿಗೆ ಸೇರಿದ್ದ ಇವನು, ಹೆಚ್ಚಿನ ಮೀಸಲಾತಿ ಪ್ರಯೋಜನ ಪಡೆಯಲು ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ಸುಳ್ಳು ಮಾಹಿತಿ ನೀಡಿ, 2010ರ ಆಗಸ್ಟ್ 19ರಂದು ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದನು. ಅಲ್ಲದೆ, ತನ್ನ ಇಬ್ಬರು ಮಕ್ಕಳ ಹೆಸರಲ್ಲಿಯೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು, ಶಿಕ್ಷಣ ಮತ್ತು ಸೌಲಭ್ಯಗಳನ್ನು ದೊರಕಿಸಿಕೊಟ್ಟಿದ್ದನು.

ಸರ್ಕಾರಕ್ಕೆ ಹಾಗೂ ಪರಿಶಿಷ್ಟ ಜಾತಿಯವರಿಗೆ ವಂಚನೆ ಮಾಡಿರುವ ಕುರಿತು ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.