ADVERTISEMENT

ನಿವೃತ್ತ ಗ್ರಂಥಪಾಲಕರಿಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 16:23 IST
Last Updated 11 ಅಕ್ಟೋಬರ್ 2020, 16:23 IST
ನಿವೃತ್ತರಾದ ಗ್ರಂಥಪಾಲಕ ಬಿ.ಎಸ್.ಮಾಳವಾಡ ಅವರನ್ನು ಬಸವ ಪರಿಸರ ಸಂರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು
ನಿವೃತ್ತರಾದ ಗ್ರಂಥಪಾಲಕ ಬಿ.ಎಸ್.ಮಾಳವಾಡ ಅವರನ್ನು ಬಸವ ಪರಿಸರ ಸಂರಕ್ಷಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು   

ಹುಬ್ಬಳ್ಳಿ: ಕೆ.ಎಲ್.ಇ ಸಂಸ್ಥೆಯ ಪಿ.ಸಿ.ಜಾಬಿನ ವಿಜ್ಞಾನ ಕಾಲೇಜಿನ ಗ್ರಂಥಾಲಯದಲ್ಲಿ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಮಾಳವಾಡ ಅವರನ್ನು ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಎಚ್.ಎಫ್. ಕಟ್ಟಿಮನಿ ಕನ್ನಡ ಪ್ರೌಢಶಾಲೆಯ ಶಿಕ್ಷಕಿ ಪ್ರೇಮಾ ಎಸ್. ಕಳ್ಳಿಮನಿ ಹಾಗೂ ಚಿನ್ಮಯ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯದ ಗ್ರಂಥಪಾಲಕ ಚಂದ್ರಶೇಖರ ನಿಂ. ಚನ್ನಂಗಿ ಅವರು ಮಾತನಾಡಿ ‘ಮಾಳವಾಡ ಅವರು ಸದಾ ಕ್ರಿಯಾಶೀಲರಾಗಿ ತಮ್ಮ ಹತ್ತಿರ ಸಹಾಯಕ್ಕಾಗಿ ಬಂದವರಿಗೆ ನೆರವಾಗುತ್ತಿದ್ದರು. ತಮ್ಮ ವೃತ್ತಿಯ ಜೊತೆಗೆ ಉತ್ತಮ ಪ್ರವೃತ್ತಿ ರೂಢಿಸಿಕೊಳ್ಳಲು ಹೇಳುತ್ತಿದ್ದರು’ ಎಂದರು.

ಸಮಿತಿಯ ಕಾರ್ಯದರ್ಶಿ ಸುರೇಶ ಡಿ. ಹೊರಕೇರಿ, ಶಿವರುದ್ರ ಟ್ರಸ್ಟನ ನಿರ್ದೇಶಕ ಡಾ. ಬಸವಕುಮಾರ ತಲವಾಯಿ, ಹುಬ್ಬಳ್ಳಿ ಶಹರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ ಕಾರ್ಯದರ್ಶಿ ಮೃತ್ಯುಂಜಯ ಮಟ್ಟಿ, ಜಾಗೃತ ಸಮಾಜ ನಿರ್ಮಾಣ ಟ್ರಸ್ಟ್‌ ಅಧ್ಯಕ್ಷ ಗುರುಪಾದ ಬ ಕರ್ಲಟ್ಟಿ, ಆನಂದ ಘಟಪನದಿ, ಗ್ರಂಥಪಾಲಕ ರವೀಂದ್ರ ಉಮ್ರಾಣಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.