ADVERTISEMENT

ಧಾರವಾಡ | ಕೆರೆ ಒತ್ತುವರಿ ತೆರವಿಗೆ ಕೋರ್ಟ್‌ಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 6:39 IST
Last Updated 7 ಜುಲೈ 2020, 6:39 IST
   

ಹುಬ್ಬಳ್ಳಿ: ಅವಳಿ ನಗರದ ಐದು ಕೆರೆಗಳ ಒತ್ತುವರಿಯಾಗಿವೆ. ಅವುಗಳ‌ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ರೈತ ಸೇನಾ ರಾಜ್ಯ ಘಟಕದ ವಿರೇಶ ಸೊಬರದಮಠ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಉಣಕಲ್ ಕೆರೆ, ತೋಳನ ಕೆರೆ, ಕೆಲಗೇರಿ, ಸಾಧನಕೇರಿ ಹಾಗೂ ಕೋಳಿ ಕೆರೆ ಒತ್ತುವರಿ ಯಾಗಿವೆ ಎಂದು ಆರೋಪಿಸಿದರು.

ಮೇಲಿನ ಎಲ್ಲ ಕೆರೆಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ. ಕಾಮಗಾರಿ ಕಳಪೆಯಾಗಿದ್ದು, ಆ ಬಗ್ಹೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

ಅಭಿವೃದ್ಧಿಯ ಹೆಸರಿನಲ್ಲಿ ಕೆರೆಗಳ ಮುಚ್ಚುವ ಹುನ್ನಾರ ನಡೆದಿದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.