ಹುಬ್ಬಳ್ಳಿ: ಅವಳಿ ನಗರದ ಐದು ಕೆರೆಗಳ ಒತ್ತುವರಿಯಾಗಿವೆ. ಅವುಗಳ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ರೈತ ಸೇನಾ ರಾಜ್ಯ ಘಟಕದ ವಿರೇಶ ಸೊಬರದಮಠ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಣಕಲ್ ಕೆರೆ, ತೋಳನ ಕೆರೆ, ಕೆಲಗೇರಿ, ಸಾಧನಕೇರಿ ಹಾಗೂ ಕೋಳಿ ಕೆರೆ ಒತ್ತುವರಿ ಯಾಗಿವೆ ಎಂದು ಆರೋಪಿಸಿದರು.
ಮೇಲಿನ ಎಲ್ಲ ಕೆರೆಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ. ಕಾಮಗಾರಿ ಕಳಪೆಯಾಗಿದ್ದು, ಆ ಬಗ್ಹೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಅಭಿವೃದ್ಧಿಯ ಹೆಸರಿನಲ್ಲಿ ಕೆರೆಗಳ ಮುಚ್ಚುವ ಹುನ್ನಾರ ನಡೆದಿದೆ ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.