ADVERTISEMENT

ಹುಬ್ಬಳ್ಳಿ: ಕೆಸಿಸಿಐನಿಂದ ಐವರು ಸಾಧಕರಿಗೆ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 7:54 IST
Last Updated 1 ಆಗಸ್ಟ್ 2021, 7:54 IST
ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು.
ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು.   

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಭಾನುವಾರ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ತುಮಕೂರಿನ ಸಿಒಪಿಪಿಆರ್ ಆರ್ ಒಡಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ನ ಎಚ್.ಜಿ. ಚಂದ್ರಶೇಖರ, ಹುಬ್ಬಳ್ಳಿಯ ಮೆ. ಮಾಣಿಕ್ ಬಾಗ್ ಆಟೊಮೊಬೈಲ್ ಪ್ರೈವೇಟ್ ಲಿಮಿಟೆಡ್ ನ ರಮೇಶ ಶಹಾ, ಮೆ. ಅಲ್ಯು ಪ್ರಿಂಟ್ಸ್ ನ ಜಯಪ್ರಕಾಶ ಟೆಂಗಿನಕಾಯಿ, ಮೆ. ವಿಜಯ ಎಲೆಕ್ಟ್ರಿಕಲ್ಸ್ ನ ವಿಜಯಕುಮಾರ ಗುಡ್ಡದ ಹಾಗೂ ಹೊಸಪೇಟೆಯ ಮೆ. ಸಾಯಿ ಪೆಟ್ ಪ್ರಿಸಾರ್ಮ್ಸ್ ಇಂಡಸ್ಟ್ರೀಸ್ ನ ಸಂತೋಷ ನಾಗ ಪತ್ತಿಕೊಂಡ ಅವರಿಗೆ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹೊಸಹಳ್ಳಿ ಸಂಸ್ಥಾನಮಠದ ಜಗದ್ಗುರು ಅಭಿನವ ಬೂದೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿ ಡಾ. ಅನಂತ ಕೊಪ್ಪರ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT