ADVERTISEMENT

ಹುಬ್ಬಳ್ಳಿ | ವಿವಿಧೆಡೆ ಧ್ವಜಾರೋಹಣ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 6:46 IST
Last Updated 27 ಜನವರಿ 2026, 6:46 IST
ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಆಚರಿಸಲಾಯಿತು
ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಸೋಮವಾರ ಗಣರಾಜ್ಯೋತ್ಸವ ಆಚರಿಸಲಾಯಿತು   

ಹುಬ್ಬಳ್ಳಿ: ನಗರದ ವಿವಿಧೆಡೆ ಸೋಮವಾರ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಜೆ.ಕೆ. ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಮುಖ್ಯ ಅತಿಥಿ ರೇಷ್ಮಾ ದೊಡ್ಡಮನಿ ಹಾಗೂ ಆಡಳಿತ ಮಂಡಳಿ ಸದಸ್ಯರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು. ಭಾಷಣ ಹಾಗೂ ನಾಟಕ ಪ್ರದರ್ಶನ ನಡೆಯಿತು.

ನಗರದ ರಾಷ್ಟ್ರೀಯ ತೋಟಗಾರಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಒಕ್ಕೂಟದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ನಿವೃತ್ತ ಶಿಕ್ಷಕ ಜೆ.ಎಲ್‌. ಚಂದ್ರಶೇಖರಯ್ಯ, ಹುಬ್ಬಳ್ಳಿ ಸಹಕಾರ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಗಂಗಾಧರ ಬಂಗಾರಗುಂಡ, ತಾಂತ್ರಿಕ ಸಿಬ್ಬಂದಿ ಧನಂಜಯ ಜಿ. ದೇಸಾಯಿ, ಟಿ.ಪ್ರಭಾಕರ, ಜೆ.ಸಿ. ತಿಲಕ ಭಾಗವಹಿಸಿದ್ದರು.

ADVERTISEMENT

ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಪ್ರಾಚಾರ್ಯ ಕುಮಾರಸ್ವಾಮಿ ಮೇವುಂಡಿಮಠ ಧ್ವಜಾರೋಹಣ ನೆರವೇರಿಸಿದರು. ಅಂಬೇಡ್ಕರ್, ಮಹಾತ್ಮ ಗಾಂಧಿ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಲಾಯಿತು. ಉಪನ್ಯಾಸಕಿ ವಂದನಾ ಶೆಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೆಎಲ್‌ಇ ಸಂಸ್ಥೆಯ ಎಂ.ಆರ್.ಸಾಖರೆ ಇಂಗ್ಲಿಷ್‌ (ರಾಜ್ಯ) ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತು ಪ್ರದರ್ಶಿಸಿದರು. ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜರೋಹಣ ನೆರವೇರಿಸಲಾಯಿತು.

ಪ್ರಾಂಶುಪಾಲ ಶೀತಲ್ ತಿವಾರಿ ಮಾತನಾಡಿ, ‘ದೇಶದ ಏಕತೆ, ಸಮಾನತೆ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹೊಣೆ‌’ ಎಂದರು.

ಮೈಂಡ್ ಸ್ಪಾರ್ಕ್‌ನಲ್ಲಿ ಅತಿಹೆಚ್ಚು ಸ್ಪಾರ್ಕ್ ಗಳಿಸಿದ ಅದಿತಿ ಕಟ್ಟಿಮನಿಗೆ ಟ್ಯಾಬ್ ವಿತರಿಸಿ ಪ್ರೋತ್ಸಾಹಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರು, ಎನ್‌ಸಿಸಿ ಮೇಜರ್ ಶಿವಾನಂದ ಅವರು ಪ್ರಾಂಶುಪಾಲರೊಂದಿಗೆ ಸಾಧಕ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪದಕ, ಪ್ರಶಸ್ತಿಪತ್ರ ವಿತರಿಸಿದರು. ಆರತಿ ಹಾಗೂ ವೀರಪ್ರಸಾದ್ ನಿರೂಪಿಸಿದರು.

ಹುಬ್ಬಳ್ಳಿಯ ಭಾವದೀಪ ಶಿಕ್ಷಣ ಸಂಸ್ಥೆಯ ಶ್ರೀಮತಿ ವಿಮಲಾ ಕುಲಕರ್ಣಿ ಮೆಮೊರಿಯಲ್‌ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ರಾಮನಗೌಡ ಸಂಕನಗೌಡರ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಆಡಳಿತ ಮಂಡಳಿಯ ಸದಸ್ಯ ಶ್ರೀರಂಗ ಹನುಮಸಾಗರ ಪ್ರಾಚಾರ್ಯ ಎಂ.ಕೆ. ಹಿರೇಮಠ ಮತ್ತು ಮುಖ್ಯೋಪಾಧ್ಯಾಯ ಅನಿತಾ ಬಾಗಲಕೋಟ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು
ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ (ಐಸಿಎಐ) ಹುಬ್ಬಳ್ಳಿ ಶಾಖೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯದರ್ಶಿ ಮಂಜುನಾಥ ಮೇಟಿ ಅಧ್ಯಕ್ಷ ಅಕ್ಷಯಕುಮಾರ್ ಸಿಂಘಿ ಪಾಲ್ಗೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.