ಹುಬ್ಬಳ್ಳಿ: ರಾಜ್ಯದಲ್ಲಿರುವುದು ರಿವರ್ಸ್ ಗೇರ್ ಸರ್ಕಾರ. ಜನರಿಗೆ ಕೊಟ್ಟ ಗ್ಯಾರಂಟಿ ಹಾಗೂ ನಾವು ಮಾಡಿರುವ ಜನಪರ ಕಾನೂನುಗಳ ವಿಷಯದಲ್ಲಿ ರಿವರ್ಸ್ ಹೋಗುವುದರೊಂದಿಗೆ, ಸೇಡಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಜನರಿಗೂ ಅದರ ಪರಿಣಾಮ ಗೊತ್ತಾಗುತ್ತಿದೆ ಎಂದು ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಾಗ ಸ್ವೇಚ್ವಾಚಾರವಾಗಿ ಎಲ್ಲವನ್ನೂ ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು ಎಂದರು.
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಕೈಯಲ್ಲಿ ಅಧಿಕಾರವಿದೆ. ಏನೇನು ಮಾಡುತ್ತಾರೊ ನೋಡೋಣ.
ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯವಾದರೆ ನಾವು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.