ADVERTISEMENT

ಮಾಜಿ ಸಚಿವ ಮಲ್ಲಾರಿಗೌಡ ಪಾಟೀಲ ಅಂತ್ಯಸಂಸ್ಕಾರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 8:49 IST
Last Updated 2 ಜನವರಿ 2020, 8:49 IST
ಸಂಕೇಶ್ವರದಲ್ಲಿ ಬುಧವಾರ ನಡೆದ ಮಾಜಿ ಸಚಿವ ಮಲ್ಲಾರಿಗೌಡ ಪಾಟೀಲ ಅವರ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. 
ಸಂಕೇಶ್ವರದಲ್ಲಿ ಬುಧವಾರ ನಡೆದ ಮಾಜಿ ಸಚಿವ ಮಲ್ಲಾರಿಗೌಡ ಪಾಟೀಲ ಅವರ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು.    

ಸಂಕೇಶ್ವರ: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭೆಯ ಉಪಾಧ್ಯಕ್ಷ ಮಲ್ಲಾರಿಗೌಡ ಪಾಟೀಲ (79) ಅಂತ್ಯಸಂಸ್ಕಾರ ಅವರ ತೋಟದಲ್ಲಿ ಬುಧವಾರ ನೆರವೇರಿತು. ಕುಟುಂಬ ಸದಸ್ಯರು, ವಿವಿಧ ಮಠಾಧೀಶರು, ಶಾಸಕರು ಸೇರಿದಂತೆ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು.

ಮಲ್ಲಾರಿಗೌಡ ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದರು. ಶಾಸಕರಾದ ಉಮೇಶ ಕತ್ತಿ, ಲಕ್ಷ್ಮಿ ಹೆಬ್ಬಾಳಕರ, ಮಾಜಿ ಸಚಿವರಾದ ಪ್ರಕಾಶ ಹುಕ್ಕೇರಿ, ಶಶಿಕಾಂತ ನಾಯಿಕ, ವೀರಕುಮಾರ ಪಾಟೀಲ, ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಚಿಕ್ಕೋಡಿಯ ಸಂಪಾದನಾ ಮಠದ ಸ್ವಾಮೀಜಿ ಸೇರಿದಂತೆ ಹಲವಾರು ಪ್ರಮುಖರು ಬುಧವಾರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 12-30 ಕ್ಕೆ ಆರಂಭವಾದ ಪಾರ್ಥಿವ ಶರೀರದ ಮರವಣಿಗೆ ಸುಮಾರು 2 ತಾಸುಗಳವರೆಗೆ ನಡೆಯಿತು. ಮಧ್ಯಾಹ್ನ 3 ಗಂಟೆಗೆ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.