ADVERTISEMENT

‘ಎಲ್ಲಾ ಸೋಂಕಿತರಿಗೂ ಜಿನೋಮ್‌ ಪರೀಕ್ಷೆ’

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 17:31 IST
Last Updated 28 ಏಪ್ರಿಲ್ 2022, 17:31 IST

ಹುಬ್ಬಳ್ಳಿ:ಕೋವಿಡ್‌ ಸೋಂಕಿತರಾಗುವ ಎಲ್ಲರಿಗೂವಂಶವಾಹಿ ಸಂರಚನೆ ವಿಶ್ಲೇಷಣೆಗೆ (ಜಿನೋಮ್‌ ಸಿಕ್ವೆನ್ಸಿಂಗ್) ಪರೀಕ್ಷೆ ಮಾಡಲಾಗುವುದು ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಲ್ಕನೇ ಅಲೆ ಬಂದಿಲ್ಲ. ಲಸಿಕೆ ಪಡೆಯದ ಯುರೋಪ್‌ ರಾಷ್ಟ್ರಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು. ಸೋಂಕು ದೃಢಪಟ್ಟರೆ ಅವರನ್ನು ಜಿನೋಮ್‌ ಪರೀಕ್ಷೆಗೆ ಒಳಪಡಿಸಲಾಗುವುದು. ಇದರಿಂದಅವರಲ್ಲಿ ಸೋಂಕಿನ ಬೇರೆ ತಳಿಗಳಿದ್ದರೆ ಗೊತ್ತಾಗುತ್ತದೆ. ಈಗಾಗಲೇ ರಾಜ್ಯದಲ್ಲಿ 8,500 ಜನರಿಗೆ ಜಿನೋಮ್‌ ಪರೀಕ್ಷೆ ಮಾಡಲಾಗಿದೆ’ ಎಂದರು. ‘6ರಿಂದ 12 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ನೀಡಲು ಪ್ರಾಥಮಿಕ ಶಾಲೆಗಳಲ್ಲಿ ಲಸಿಕಾ ಅಭಿಯಾನ ಆರಂಭಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT