
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ನೆಹರೂ ನಗರದಲ್ಲಿರುವ ಅನಿಲಕುಮಾರ ಹೇಮಗಿರಿಯಪ್ಪ ಅವರ ತಾಯಿಯ ಮನೆಯಲ್ಲಿ ₹6.36 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳಗೆ ನುಗ್ಗಿರುವ ಕಳ್ಳರು, ಅಲ್ಮೆರಾದಲ್ಲಿದ್ದ 30 ಮತ್ತು 40 ಗ್ರಾಂ ತೂಕದ ಎರಡು ಚಿನ್ನದ ಸರ, 36 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿನ್ನಾಭರಣ ಕಳವು: ಇಲ್ಲಿನ ಉಣಕಲ್ನ ಪ್ಯಾಟಿಸಾಲ ಓಣಿಯಲ್ಲಿರುವ ಮಹಾಂತೇಶ ಹೂಗಾರ ಅವರ ಮನೆಯಲ್ಲಿ ಕಳ್ಳರು ₹2.45 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
5 ಗ್ರಾಂ ತೂಕದ ಕಿವಿಯೋಲೆ, 20 ಗ್ರಾಂ ತೂಕದ ಉಂಗುರ, 10 ಗ್ರಾಂ ತೂಕದ ಬ್ರೇಸ್ಲೆಟ್ ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.