ಕಲಘಟಗಿ: ಧಾರಾಕಾರ ಮಳೆಗೆ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದ ದೊಡ್ಡಕೇರಿ ಸೇತುವೆಗೆಕೊಚ್ಚಿ ಹೋಗುತ್ತಿರುವ ವ್ಯಕ್ತಿಯನ್ನು ರಕ್ಷಣೆ ಮಾಡಿದ ಗ್ರಾಮಸ್ಥರ ವಿಡಿಯೊ ವೈರಲ್ ಆಗಿದೆ.
ಹೌದು ತಾಲ್ಲೂಕಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗಂಜಿಗಟ್ಟಿಯಿಂದ ಕಲಘಟಗಿಗೆ ರಸ್ತೆ ಸಂಚಾರ ಕಲ್ಪಿಸುವ ರಸ್ತೆ ಇದಾಗಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದರಿಂದ ಅರಳಿಕಟ್ಟಿ ಗ್ರಾಮದ ವಾಹನ ಸವಾರ ಕಲಘಟಗಿ ಕಡೆಗೆ ದ್ವಿಚಕ್ರ ವಾಹನ ತೆಗೆದುಕೊಂಡು ಸೇತುವೆ ದಾಟ್ಟಿರುವಾಗ ನೀರಿನ ರಬಸಕ್ಕೆ ಕೊಚ್ಚಿ ಹೋಗುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಸ್ಥರು ದೌಡಯಿಸಿ ಆತನನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಈ ಸೇತುವೆ ಮೇಲದರ್ಜೆಗೇರಿಸಬೇಕು ಎಂಬುದು ಈ ಭಾಗದ ಜನರ ಹಲವು ದಶಕಗಳ ಬೇಡಿಕೆಯಾದರು ಅಧಿಕಾರಿಗಳು ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂಬುವದು ಗ್ರಾಮಸ್ಥರು ಗಂಭೀರ ಆರೋಪವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.