ADVERTISEMENT

ಹುಬ್ಬಳ್ಳಿಯಲ್ಲಿ ಜೋರು‌ ಮಳೆ, ವಾಹನ ಸವಾರರ ಪರದಾಟ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 11:09 IST
Last Updated 20 ಅಕ್ಟೋಬರ್ 2020, 11:09 IST
   

ಹುಬ್ಬಳ್ಳಿ: ನಗರದಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಜೋರು‌ ಮಳೆ ಆರಂಭವಾಯಿತು.

ಗುಡುಗು ಹಾಗೂ ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿಯಿತು. ದಿಢೀರನೆ ಜೋರಾಗಿ ಮಳೆ ಸುರಿದ ಕಾರಣ ವಾಹನ ಸವಾರರು, ಹೊಸೂರು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು, ಬೀದಿ‌ ಬದಿಯ ವ್ಯಾಪಾರಿಗಳು ಪರದಾಡಬೇಕಾಯಿತು. ಮಳೆಯಲ್ಲಿ ‌ನೆಂದುಕೊಂಡೇ ಹೋಗುತ್ತಿದ್ದ ಚಿತ್ರಣ ಕಂಡು ಬಂತು.

ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಜೋರಾಗಿ ಮಳೆ‌ ಬಂದಿರಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.