ADVERTISEMENT

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 20 ಮೇ 2022, 6:26 IST
Last Updated 20 ಮೇ 2022, 6:26 IST
ಧಾರಾಕಾರ ಮಳೆಯಿಂದಾಗಿ ಜಲಾವೃತ್ತಗೊಂಡಿರುವ ಹಳೇ ಹುಬ್ಬಳ್ಳಿಯ ಗಣೇಶ ನಗರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಧಾರಾಕಾರ ಮಳೆಯಿಂದಾಗಿ ಜಲಾವೃತ್ತಗೊಂಡಿರುವ ಹಳೇ ಹುಬ್ಬಳ್ಳಿಯ ಗಣೇಶ ನಗರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು   

ಹುಬ್ಬಳ್ಳಿ: ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದೆ.

ಹಳೇ ಹುಬ್ಬಳ್ಳಿಯ ಆಂಟನಿ‌ ಕಾಲೊನಿಯಲ್ಲಿ ಒಳ ಚರಂಡಿ ಕಟದ ಮಳೆ ನೀರು ಮನೆಗೆ ನುಗ್ಗಿದ್ದರಿಂದ ಕುಟುಂಬದವರು ಪರದಾಡಿದರು. ದೇಶಪಾಂಡೆ ನಗರದ ಬಳಿಯ ಕೆಲ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದ್ದು, ಯಂತ್ರದ ಸಹಾಯದಿಂದ ನೀರನ್ನು ಹೊರ ಹಾಕುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT