ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಬುಧವಾರ ಅರ್ಜಿ ವಿಚಾರಣೆಯ ನಡೆದ ಸಂದರ್ಭದಲ್ಲಿ ಜಮೀನು ಕೊಡದಂತೆ ಸಿಬಿಐ ಪರ ವಕೀಲರು ಮನವಿ ಮಾಡಿದ್ದರು. ಜತೆಗೆ ಸೂಕ್ತ ದಾಖಲೆ ನೀಡಲು ಒಂದು ದಿನದ ಕಾಲಾವಕಾಶ ಕೇಳಿದ್ದರು.
ಹೀಗಾಗಿ ಗುರುವಾರ ವಿಚಾರಣೆ ಮುಂದುವರಿಸಿದ ನ್ಯಾಯಮೂರ್ತಿ ಕೆ.ಎನ್.ನಟರಾಜ ಅವರಿದ್ದ ನ್ಯಾಯಪೀಠ ಜಮೀನು ಅರ್ಜಿಯನ್ನು ವಜಾಗೊಳಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.