ADVERTISEMENT

‘ಜೆಎನ್‌ಯು ಘರ್ಷಣೆ: ಉನ್ನತ ಮಟ್ಟದ ತನಿಖೆ’

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 11:42 IST
Last Updated 6 ಜನವರಿ 2020, 11:42 IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ   

ಹುಬ್ಬಳ್ಳಿ: ‘ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯಕ್ಕೆ ಗುಂಪೊಂದು ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಖಂಡಿಸಲಿದೆ. ಜತೆಗೆ, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇಲ್ನೋಟಕ್ಕೆ ಇದು ಎರಡು ಗುಂಪುಗಳ ನಡುವಿನ ಘರ್ಷಣೆ ಎಂದು ಕಂಡುಬಂದಿದೆ. ಆದರೆ, ಕಾಂಗ್ರೆಸ್‌ನವರು ಘಟನೆ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸುವ ಮೂಲಕ, ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ವಿಶ್ವವಿದ್ಯಾಲಯದಲ್ಲಿ ಹಿಂದಿನಿಂದಲೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿರುವ ಸಾಧ್ಯತೆ ಇದೆ. ಹಾಗಾಗಿ, ಆ ಬಗ್ಗೆಯೂ ತನಿಖೆ ನಡೆಯಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.