ADVERTISEMENT

ಹುಬ್ಬಳ್ಳಿ: ಉಪಾಹಾರದಲ್ಲಿ ಬಾಲಹುಳು; ಇಂದೇ ವರದಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 13:29 IST
Last Updated 6 ಜೂನ್ 2020, 13:29 IST

ಹುಬ್ಬಳ್ಳಿ: ಮಹಾನಗರ ಪಾಲಿಕೆ ಪೌರಕಾರ್ಮಿಕರಿಗೆ ಶನಿವಾರ ಬೆಳಿಗ್ಗೆ ನೀಡಿದ ಉಪಾಹಾರದಲ್ಲಿ ಬಾಲಹುಳುಗಳು ಕಂಡು ಬಂದಿದ್ದು, ಈ ಕುರಿತು ಇಂದೇ (ಶನಿವಾರ) ಸಮಗ್ರವಾದ ವರದಿ ನೀಡಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗವು ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದೆ.

ಪೌರ ಕಾರ್ಮಿಕರಿಗೆ ಆಹಾರ ನೀಡುವ ಮೊದಲು ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆ ಪಡೆದ ಕಂಪನಿ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಈ ಪ್ರಕರಣವನ್ನು ಆಯುಕ್ತರು ಗಂಭೀರವಾಗಿ ಪರಿಗಣಿಸಬೇಕು, ಮುಂದಿನ ದಿನಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT