
ಪ್ರಜಾವಾಣಿ ವಾರ್ತೆಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿಯ ಕೋಟಿಲಿಂಗ ನಗರದ ಶೋಭಿತಾ ಅರಕೇರಿ ಅವರ ಮನೆ ಬಾಗಿಲಿನ ಬೀಗ ಮುರಿದು ₹7.54 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1.20 ಲಕ್ಷ ನಗದು ಕಳವು ಮಾಡಲಾಗಿದೆ. ಈ ಬಗ್ಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆ: ಎಕ್ಸ್ನೆಸ್ ಆ್ಯಪ್ ಮೂಲಕ ಯುಎಸ್ಡಿಟಿನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಗರದ ಮುದಕಪ್ಪ ಅಂಗಡಿ ಅವರಿಗೆ ಸಂದೇಶ ಕಳುಹಿಸಿದ್ದ ವ್ಯಕ್ತಿ, ₹9.97 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.