ಹುಬ್ಬಳ್ಳಿ: ನಗರದ ಮರಾಠಗಲ್ಲಿಯ ಶಿವಾಜಿ ವೃತ್ತದ ಬಳಿ ಬೃಹತ್ ಗಣೇಶ ಮೂರ್ತಿಯ ಬಟ್ಟೆಗೆ ಬೆಂಕಿ ತಗುಲಿದ್ದರಿಂದ, ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
25 ಅಡಿ ಎತ್ತರದ ಮೂರ್ತಿಗೆ ತೊಡಿಸಿದ್ದ ರೇಷ್ಮೆ ಬಟ್ಟೆಗೆ ಸಿಡಿಮದ್ದಿನ ಕಿಡಿ ತಾಕಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಸಮಿತಿ ಸದಸ್ಯರು ನೀರು ಹಾಕಿ ಬೆಂಕಿ ನಂದಿಸಿದರು. ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ ತೊಡಿಸಿ, ಮೆರವಣಿಗೆ ಮುಂದುವರಿಸಿದರು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.