ADVERTISEMENT

ಯುವಕನ ಕೊಲೆ: ಸಹೋದರರಿಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 8:10 IST
Last Updated 24 ಜೂನ್ 2022, 8:10 IST
   

ಹುಬ್ಬಳ್ಳಿ: ಸಹೋದರಿಗೆ ಚುಡಾಯಿಸಿದ ಎಂಬ ಕಾರಣಕ್ಕೆ, ಯುವಕನೊಬ್ಬನನ್ನು ಸಹೋದರರಿಬ್ಬರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ ಪ್ಲಾಟ್ ನಲ್ಲಿ ನಡೆದಿದೆ.

ಆಟೊ ಚಾಖ ಚಂದ್ರು ಗುಗ್ಗರಿ ಮೃತ ಕೊಲೆಯಾದ ಯುವಕ. ಆರೋಪಿಗಳಾದ ವಿನಾಯಕ ಭಜಂತ್ರಿ ಮತ್ತು ಕಿರಣ ಭಜಂತ್ರಿಯನ್ನು ಹಳೇ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ರಾತ್ರಿ ಚಂದ್ರು ಬೆನ್ನು, ಕುತ್ತಿಗೆ ಹಾಗೂ ಹೊಟ್ಟೆಗೆ ಸಹೋದರರು ಚಾಕುವಿನಿಂದ ಇರಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.