ADVERTISEMENT

ಹುಬ್ಬಳ್ಳಿ: ಅರ್ನಾಬ್‌ ಗೋಸ್ವಾಮಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 8:48 IST
Last Updated 23 ಏಪ್ರಿಲ್ 2020, 8:48 IST
ಅರ್ನಬ್ ಗೋಸ್ವಾಮಿ ವಿರುದ್ಧ ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್
ಅರ್ನಬ್ ಗೋಸ್ವಾಮಿ ವಿರುದ್ಧ ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್    

ಹುಬ್ಬಳ್ಳಿ:ಖಾಸಗಿ ವಾಹಿನಿ ಸಂಪಾದಕ ಅರ್ನಾಬ್‌ ಗೋಸ್ವಾಮಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಇಲ್ಲಿನ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿದೆ.

ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ನಡೆದಿದ್ದ ಗುಂಪು ಹಲ್ಲೆಯಲ್ಲಿ ಇಬ್ಬರು ಸಾಧುಗಳು ದುರ್ಮರಣಕ್ಕೀಡಾದ ವಿಚಾರದ ಮೇಲಿನ ಟಿ.ವಿ ಚರ್ಚೆಯ ವೇಳೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರನ್ನು ಅರ್ನಾಬ್‌ ಉಲ್ಲೇಖಿಸಿದ್ದರು. ಆದ್ದರಿಂದ ಕಾಂಗ್ರೆಸ್ ದೂರು ನೀಡಿದೆ.

ತಮ್ಮ ಮೇಲೆ ದಾಳಿ ಪ್ರಯತ್ನ ನಡೆದಿದೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಕಾಂಗ್ರೆಸ್ ಹೊಣೆ‌ ಎಂದು ಅರ್ನಾಬ್ ಹೇಳಿದ್ದಾರೆ. ಇದರಲ್ಲಿ ಸೋನಿಯಾ ಗಾಂಧಿ ಅವರನ್ನು ವಿನಾಕಾರಣ ಎಳೆದು ತರಲಾಗಿದೆ. ಈ ಕುರಿತು ಕ್ರಮ ತೆಗೆದುಕೊಳ್ಳಬೇಕು. ಅರ್ನಾಬ್ ಸುಪ್ರಿಂ ಕೋರ್ಟ್ ಆದೇಶವನ್ನೂ ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರು ಹಾಗೂ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.