ಹುಬ್ಬಳ್ಳಿ: ಕೆಎಸ್ಆರ್ ಬೆಂಗಳೂರು–ಧಾರವಾಡ ಸೂಪರ್ಫಾಸ್ಟ್ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜ. 3, 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ. ಇದೇ ರೈಲು ಧಾರವಾಡದಿಂದ ಜ. 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ತಿಳಿಸಿದೆ.
ಹೊಸಪೇಟೆ–ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಜ. 3 ಮತ್ತು 11ರಂದು, ಕೆಎಸ್ಆರ್ ಬೆಂಗಳೂರು–ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಂಚಾರವನ್ನು ಜ. 3 ಹಾಗೂ 11ರಂದು ರದ್ದುಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.