ADVERTISEMENT

ಹುಬ್ಬಳ್ಳಿ: ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 7:47 IST
Last Updated 5 ಅಕ್ಟೋಬರ್ 2020, 7:47 IST
   

ಹುಬ್ಬಳ್ಳಿ: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಆಟೊ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ ₹5ಸಾವಿರ ಪರಿಹಾರ ಇನ್ನೂ ತಲುಪಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಟೊ ರಿಕ್ಷಾ ಮಾಲೀಕರ, ಚಾಲಕರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್'ನಿಂದ ಜೂನ್'ವರೆಗೆ ದುಡಿಮೆಯಿಲ್ಲದೆ ಸಂಕಷ್ಟದ ಪರಿಸ್ಥಿತಿ ಎದುರಿಸಿದ್ದೇವೆ. ಆ ವೇಳೆ ಸರ್ಕಾರ ಪರಿಹಾರವೆಂದು ₹5ಸಾವಿರ ಘೋಷಣೆ ಮಾಡಿತ್ತು. ಸರ್ಕಾರದ ಮಾರ್ಸೂಚಿಯಂತೆ ಅರ್ಜಿ ಸಲ್ಲಿಸಿದ್ದರೂ, ಕೇವಲ ಶೇ 10 ರಷ್ಟು ಮಂದಿಗೆ ಮಾತ್ರ ಪರಿಹಾರ ದೊರಕಿದೆ. ಉಳಿದವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೂ ಏಕಕಾಲದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಒತ್ತಾಯಿಸಿದರು.

ADVERTISEMENT

ಲೋಕೇಶ ಚಿಕ್ಕಮಂಗಳೂರು, ಮೋದಿನಸಾಬ್ ದೋಣಿ, ದಾವಕಸಾಬ್ ಕುರಹಟ್ಟಿ, ಮಹಾವೀರ ಬಿಲಾನ, ಗುರು ಬೆಟಗೇರಿ, ಹನುಮಂತ ಮುಳಗುಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.