ಹುಬ್ಬಳ್ಳಿ: ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಕಾರ್ಖಾನೆಯಲ್ಲಿ ಶನಿವಾರ ನಡೆದ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಕಿಮ್ಸ್'ಗೆ ದಾಖಲಾಗಿದ್ದ ಕಲಘಟಗಿಯ ಮಾಳೇಶ ಹದ್ದನ್ನವರ(25) ಮತ್ತು ತಾರಿಹಾಳದ ಗೌರವ್ವ ಹಿರೇಮಠ(45) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ವಿಜಯಲಕ್ಷ್ಮಿ ಯಚ್ಚನಗಾರ(34) ಮೃತಪಟ್ಟಿದ್ದರು. ಗಾಯಗೊಂಡಿದ್ದ ಎಂಟು ಕಾರ್ಮಿಕರಲ್ಲಿ ಈ ಮೂವರಿಗೆ ಶೇ 80ಕ್ಕಿಂತಲೂ ಹೆಚ್ಚು ಭಾಗ ಸುಟ್ಟು ಹೋಗಿತ್ತು. ಇನ್ನುಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ಕಾರ್ಖಾನೆ ಬಾಡಿಗೆ ಪಡೆದಿದ್ದ ಮುಂಬೈ ಉದ್ಯಮಿ ಅಬ್ದುಲ್ ಶೇಖ್ ತಲೆಮರೆಸಿಕೊಂಡಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.