ADVERTISEMENT

ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಲು ವಿನಂತಿಸಿದ್ದೇನೆ: ಶಾಸಕ ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 10:32 IST
Last Updated 2 ಆಗಸ್ಟ್ 2021, 10:32 IST
ಶಾಸಕ ಜಗದೀಶ ಶೆಟ್ಟರ್
ಶಾಸಕ ಜಗದೀಶ ಶೆಟ್ಟರ್    

ಹುಬ್ಬಳ್ಳಿ: 'ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಬೇಡ, ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ' ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನಾನು ವಿವಿಧ ಇಲಾಖೆಗಳ ಸಚಿವನಾಗಿ ಅಧಿಕಾರದಲ್ಲಿ ಇದ್ದದ್ದು ಕೆಲವೇ ತಿಂಗಳು ಮಾತ್ರ. ಮುಖ್ಯಮಂತ್ರಿಯಾಗಿ 10 ತಿಂಗಳು ಮಾತ್ರ ಅಧಿಕಾರದಲ್ಲಿದ್ದೆ. ಪೂರ್ಣಾವಧಿ ಅಧಿಕಾರದಲ್ಲಿ ಇದ್ದಿದ್ದರೆ ಸಂಬಂಧಪಟ್ಟ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೆ' ಎಂದರು

'ಅಧಿಕಾರ ಇದ್ದಾಗ ಕೆಲಸ ಮಾಡಿ ತೋಡಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ಸಂಬಂಧಪಟ್ಟವರಿಂದ ಕೆಲಸ ಮಾಡಿಸುತ್ತೇನೆ. ಅಲ್ಲದೆ, ಯಾರೇ ಅಧಿಕಾರಕ್ಕೆ ಬಂದರೂ ಅವರಿಂದ ಕೆಲಸ ಮಾಡಿಸುತ್ತೇನೆ' ಎಂದು ಶೆಟ್ಟರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.