ADVERTISEMENT

ಹುಬ್ಬಳ್ಳಿಯಲ್ಲಿ ದಿಢೀರ್ ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 13:59 IST
Last Updated 14 ಮಾರ್ಚ್ 2021, 13:59 IST

ಹುಬ್ಬಳ್ಳಿ: ರಸ್ತೆಯ ಬದಿಯಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ‌ಇಟ್ಟುಕೊಂಡಿದ್ದವರಿಗೆ ಪಾಲಿಕೆ, ಜಿಲ್ಲಾಡಳಿತದ ಬಿಸಿ ಮುಟ್ಟಿಸಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಮ್ಮುಖದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರಿಂದ ವ್ಯಾಪಾರಿಗಳಿಗೆ ಎಚ್ಚರಿಕೆ ನಿಡಲಾಯ್ತು.

ADVERTISEMENT

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ದಾಜೀಬಾನ್ ಪೇಟೆವರೆಗೆ ಕಾರ್ಯಾಚರಣೆ ನಡೆಯಿತು.

ತೆರವು ಕಾರ್ಯಾಚರಣೆಗೆ ವ್ಯಾಪಾರಸ್ಥರ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಪೊಲೀಸರು ಮತ್ತು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.