ADVERTISEMENT

ಬೆಳೆ ಪರಿಹಾರ ಮೂರು ಪಟ್ಟು ಹೆಚ್ಚಿಸಿ: ಕೇಂದ್ರ‌ ಅಧ್ಯಯನ ತಂಡಕ್ಕೆ ರೈತರ ಮನವಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 6:42 IST
Last Updated 17 ಡಿಸೆಂಬರ್ 2021, 6:42 IST
ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮ ಹೊಲಕ್ಕೆ ಶುಕ್ರವಾರ ರೈತರು ಕೇಂದ್ರ‌ ಅಧ್ಯಯನ ತಂಡ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು.
ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮ ಹೊಲಕ್ಕೆ ಶುಕ್ರವಾರ ರೈತರು ಕೇಂದ್ರ‌ ಅಧ್ಯಯನ ತಂಡ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು.   

ಹುಬ್ಬಳ್ಳಿ: ಬೆಳೆ ಪರಿಹಾರ ಬಹಳ ಕಡಿಮೆ ಇದ್ದು, ಅದನ್ನು ಮೂರು ಪಟ್ಡು ಹೆಚ್ಚಿಸಬೇಕು‌ ಎಂದು ರೈತರು ಕೇಂದ್ರ‌ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.

ಧಾರವಾಡ ಜಿಲ್ಲೆಯಲ್ಲಿ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮ ಹೊಲಕ್ಕೆ ಶುಕ್ರವಾರ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದ ನಂತರ ರೈತರು ಬೇಡಿಕೆ ಸಲ್ಲಿಸಿದರು.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧಿಕಾರಿ ಗುರುಪ್ರಸಾದ ಜೆ., ಮತ್ತು ಕೇಂದ್ರ ಹಣಕಾಸು ಅಧಿಕಾರಿ ಮಹೇಶ ಕುಮಾರ ಅವರು ಹತ್ತಿ, ಮೆಣಸಿನಕಾಯಿ, ಉಳ್ಳಾಗಡ್ಡಿ ಬೆಳೆಹಾನಿ ವೀಕ್ಷಿಸಿದರು

ADVERTISEMENT

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.