ADVERTISEMENT

ಸ್ವಾತಂತ್ರ್ಯದ ನಡಿಗೆ: ಸಿದ್ದರಾಮಯ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 5:00 IST
Last Updated 12 ಆಗಸ್ಟ್ 2022, 5:00 IST
ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ‘ಸ್ವಾತಂತ್ರ್ಯದ ನಡಿಗೆ’ಗೆ ರೈತ ಭವನ ಹತ್ತಿರ ಲಿಂಗರಾಜ್ ಸರ್ಕಲ್‌ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು
ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ‘ಸ್ವಾತಂತ್ರ್ಯದ ನಡಿಗೆ’ಗೆ ರೈತ ಭವನ ಹತ್ತಿರ ಲಿಂಗರಾಜ್ ಸರ್ಕಲ್‌ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು   

ನವಲಗುಂದ: ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸ್ವಾತಂತ್ರ್ಯದ ನಡಿಗೆಗೆ ರೈತ ಭವನ ಹತ್ತಿರ ಲಿಂಗರಾಜ್ ಸರ್ಕಲ್‌ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾಂಗ್ರೆಸ್‌ನ ಹೋರಾಟ, ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ ಎಂದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಕಾಂಗ್ರೆಸ್ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ್ರ ಹಿರೇಗೌಡ್ರ, ಜಿಲ್ಲಾ ಉಸ್ತುವಾರಿ ಡಿ.ಆರ್. ಪಾಟೀಲ, ಅನಿಲಕುಮಾರ ಪಾಟೀಲ, ಎನ್.ಎಚ್. ಕೋನರಡ್ಡಿ, ಕೆ.ಎನ್. ಗಡ್ಡಿ, ವಿನೋದ ಅಸೂಟಿ, ವಿಜಯ ಕುಲಕರ್ಣಿ, ಬಾಪುಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೆಗೌಡ ಪಾಟೀಲ, ಶಿವನಂದ ಕರಿಗಾರ, ಮಂಜುನಾಥ ಮಾಯಣ್ಣವರ, ಪಕ್ಷದ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT