ಹುಬ್ಬಳ್ಳಿ: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿರುವ ನಗರದ ಈದ್ಗಾ ಮೈದಾನದಲ್ಲಿ ಪೊಲೀಸರು ಸರ್ಪಗಾವಲು ಹಾಕಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರೀಯ ದಳವು ಮೈದಾನದ ಸುತ್ತಲೂ ತಪಾಸಣೆ ನಡೆಸಿತು.
ಎರಡು ಡ್ರೋಣ್ ಕ್ಯಾಮೆರಾಗಳಿಂದ ಮೈದಾನದಲ್ಲಿ ನಿಗಾ ವಹಿಸಲಾಯಿತು. ಶಸ್ತ್ರಸಜ್ಜಿತ ಕ್ಷಿಪ್ರ ಕಾರ್ಯಾಚರಣೆ ಪಡೆ, ನಗರ ಸಶಸ್ತ್ರ ಪಡೆಯ ಸಿಬ್ಬಂದಿಯನ್ನು ಮೈದಾನದ ಒಳಗೂ ಹಾಗೂ ಹೊರಗೂ ಭದ್ರತೆಗೆ ನಿಯೋಜಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.