ಧಾರವಾಡ: ‘ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ವಿವಿಧ ಬ್ಯಾಂಕ್ಗಳಲ್ಲಿ ಸಂಬಳ ಪ್ಯಾಕೇಜ್ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
‘ಜಿಲ್ಲೆಯ ಸರ್ಕಾರಿ ನೌಕರರು ಸಂಬಳ ಪ್ಯಾಕೇಜ್ ಖಾತೆಯ ಪ್ರಯೋಜನ ಪಡೆಯಬೇಕು. ಎಲ್ಲ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ತಮ್ಮ ಇಲಾಖೆಯ ಜಿಲ್ಲಾ, ತಾಲ್ಲೂಕು, ಗ್ರಾಮಮಟ್ಟದಲ್ಲಿರುವ ಡಿ.ಡಿ.ಒಗಳ ಮೂಲಕ ಇದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
‘ಸಂಬಳ ಪ್ಯಾಕೇಜ್ ಖಾತೆ, ಪಿ.ಎಂ.ಜೆ.ಜೆ.ಬಿ.ವೈ ಹಾಗೂ ಪಿ.ಎಂ.ಎಸ್.ಬಿ.ವೈ ವಿಮೆ ಮಾಡಿಸಿರುವ ಮಾಹಿತಿಯನ್ನು ಮೇ 10ರೊಳಗೆ ಜಿಲ್ಲಾಧಿಕಾರಿ ಕಚೇರಿಯ ಎನ್ಐಸಿ ಕಚೇರಿಯಲ್ಲಿ ಸಲ್ಲಿಸಬೇಕು. ಮಾಹಿತಿಗೆ ಮೊ.ಸಂ: 9483517730, 9538076619 ಸಂಪರ್ಕಿಸಬಹುದು’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.