ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಭಾನುವಾರ ನಗರದ ವಿವಿಧ ಸ್ಥಳಗಳಿಗೆ ಭೇಟಿ ಲಾಕ್ಡೌನ್ ಜಾರಿಯನ್ನು ಪರಿಶೀಲಿಸಿದರು.
ಕೇಶ್ವಾಪುರ ವೃತ್ತ, ಗದಗ ರಸ್ತೆ, ಸಿಬಿಟಿ, ದುರ್ಗದ ಬೈಲ್, ಹೊಸೂರು, ಕಾರವಾರ ರಸ್ತೆ, ಗೋಕುಲ ರಸ್ತೆ, ಚಾಣಕ್ಯಪುರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಅವರು, ಕರ್ತವ್ಯನಿರತ ಪೊಲೀಸರೊಂದಿಗೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.
ನಂತರ ಸರ್ಕ್ಯೂಟ್ ಹೌಸ್ನಲ್ಲಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರೊಂದಿಗೆ ಕೋವಿಡ್–19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.