ಹುಬ್ಬಳ್ಳಿ: ಹಿಂದಿನ ಅವಧಿಯಲ್ಲಿ ಪ್ರದೀಪ ಶೆಟ್ಟರ್ ಮಾಡಿದ ಅಭಿವೃದ್ಧಿ ಕಾರ್ಯಗಳು ಈ ಬಾರಿ ಅವರ ಗೆಲುವಿಗೆ ನೆರವಾಗಲಿವೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ ಪಕ್ಷದ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ಎಲ್ಲರೂ ಸೇರಿ ಒಗ್ಗಟ್ಟಿನಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದೇವೆ. ಬಿಜೆಪಿ 15 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.
ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಪಾಲಿಕೆ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲರಿಂದಲೂ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳನ್ನು ಪಡೆದು ಗೆಲುವು ಸಾಧಿಸುತ್ತಾರೆ. ಪ್ರಚಾರದ ವೇಳೆ ಮೂರು ಜಿಲ್ಲೆಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಅತೀ ಹೆಚ್ಚು ಮತಗಳನ್ನು ಪಡೆಯುತ್ತಾರೆ. ಬಂಡಾಯ ಅಭ್ಯರ್ಥಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.
ಬೆಳಗಾವಿ ಅಧಿವೇಶನ ಈ ಭಾಗದ ಜನರ ಸಮಸ್ಯೆಗಳಿಗೆ ದ್ವನಿಯಾಗಲಿದೆ. ವಿರೋಧ ಪಕ್ಷದವರ ಸಹಕಾರ ಬಹಳ ಮುಖ್ಯ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.