ADVERTISEMENT

ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ಜಮೀರ್ ಅಹ್ಮದ್ ಖಾನ್

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 19:04 IST
Last Updated 24 ಜುಲೈ 2022, 19:04 IST
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್   

ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕೆಂದು ನನ್ನ ಅಭಿಪ್ರಾಯವಷ್ಟೇ ಹೇಳಿದ್ದೇನೆ. ಸಂವಿಧಾನ ನನಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ನೀಡಿದೆ’ ಎಂದು ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ಲೆವೆಲ್ ಕುರಿತು ಯಾರು ಏನೇ ಹೇಳಲಿ, ತೀರ್ಮಾನಿಸುವುದು ಜನರು ಮಾತ್ರ’ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

‘ನಾನು ಒಕ್ಕಲಿಗ ಸಮುದಾಯದ ವಿರುದ್ಧ ಮಾತನಾಡಿಲ್ಲ. ಆ ಸಮುದಾಯದ ಸ್ವಾಮೀಜಿಗಳು ನನ್ನ ಹೇಳಿಕೆಯನ್ನು ಖಂಡಿಸಿಲ್ಲ. ಒಕ್ಕಲಿಗ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ನನ್ನನ್ನು ಇಷ್ಟಪಡುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.