ADVERTISEMENT

ಹುಬ್ಬಳ್ಳಿಯಲ್ಲಿ ಪತ್ರಕರ್ತನಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 11:24 IST
Last Updated 15 ಜುಲೈ 2020, 11:24 IST
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್ (ಸಾಂದರ್ಭಿಕ ಚಿತ್ರ)   

ಹುಬ್ಬಳ್ಳಿ: ನಗರದ ಪತ್ರಕರ್ತರೊಬ್ಬರಿಗೆ ಬುಧವಾರ ‌ಕೊರೊನಾ ಸೋಂಕು ದೃಢಪಟ್ಟಿದೆ.

ಅವರು ಕೆಲ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ನಾಲ್ಕು ದಿನಗಳ ಹಿಂದೆ ಜ್ವರ ಬಂದಿದ್ದರಿಂದ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಸೋಂಕು ಪತ್ತೆಯಾಗಿರುವ ಪತ್ರಕರ್ತನ ವರದಿ ಪಾಸಿಟಿವ್ ಬಂದಿರುವುದು ನಿಜ. ಆದರೆ, ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಆದ್ದರಿಂದ ಅವರಿಗೆ ಘಂಟಿಗೇರಿ ವಸತಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ವೈದ್ಯರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.