
ಪ್ರಜಾವಾಣಿ ವಾರ್ತೆ
ಧಾರವಾಡ: ನಗರದ ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ನೀಡುವ ಸಂಶೋಧನಾ ಪ್ರಶಸ್ತಿಗೆ ಹುಬ್ಬಳ್ಳಿಯ ಸಂಶೋಧಕ ಬಿ.ವಿ.ಶಿರೂರ ಮತ್ತು ವಚನ ಸಂಗೀತ ಪ್ರಶಸ್ತಿಗೆ ಧಾರವಾಡದ ಹಿಂದುಸ್ತಾನಿ ಸಂಗೀತ ಕಲಾವಿದೆ ಸುಜಾತಾ ಗುರವ ಆಯ್ಕೆಯಾಗಿದ್ಧಾರೆ.
ಸಂಶೋಧನಾ ಪ್ರಶಸ್ತಿಯು ₹ 50 ಸಾವಿರ ನಗದು ಮತ್ತು ವಚನ ಸಂಗೀತ ಪ್ರಶಸ್ತಿಯು ₹ 25 ಸಾವಿರ ನಗದು ಪುರಸ್ಕಾರ, ಸ್ಮರಣಿಕೆ ಒಳಗೊಂಡಿದೆ. ನವೆಂಬರ್ 28ರಂದು ಧಾರವಾಡದ ಆಲೂರು ವೆಂಕಟರಾವ್ ಭವನದಲ್ಲಿ ನಡೆಯುವ ಎಂ.ಎಂ.ಕಲಬುರ್ಗಿ ಅವರ 87ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.