ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ರೈತರ ಸಂಘದ ಉದ್ಘಾಟನೆ ಏ. 11ರಂದು ಬೆಳಿಗ್ಗೆ 11ಕ್ಕೆ ಸಿದ್ಧಾರೂಢ ಮಠದ ನಿರಂಜನ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಸಾನ್ನಿಧ್ಯವನ್ನು ಷಡಕ್ಷರಿ ದೇವರು ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಸಚಿವ ಪರ್ವತಗೌಡ್ರ ಚನ್ನವೀರಗೌಡ್ರ ಸಿದ್ದನಗೌಡ್ರ ಮಾಡಲಿದ್ದಾರೆ. ಕರ್ನಾಟಕ ರೈತ ಸಂಘದ ಅಧ್ಯಕ್ಷ ಸಿದ್ದರಾಜ ಕುಂದಗೋಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಯಾಗಿ ಸಿದ್ಧಾರೂಢ ಟ್ರಸ್ಟ್ ಕಮಿಟಿ ಚೇರ್ಮನ್ ಡಿ.ಬಿ. ಮಳಗಿ, ಧರ್ಮದರ್ಶಿ ಶ್ಯಾಮಾನಂದ ಪೂಜೇರ, ಕರ್ನಾಟಕ ರಕ್ಷಣಾ ವೇದಿಕೆಯ ಅಮೃತ ಇಜಾರಿ, ಶ್ರೀರಾಮ ಸೇನೆ ಅಧ್ಯಕ್ಷ ಸುಬ್ರಮಣ್ಯ ಶಿರಕೋಳ, ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷ ಕಳ್ಳಿಮನಿ, ಹೂವಪ್ಪ ದಾಯಗೋಡಿ, ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ರಮೇಶ ಮಹಾದೇವಪ್ಪನವರ, ದೊಡ್ಡೇಶಪ್ಪ ನಲವಡಿ ಭಾಗವಹಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.