ADVERTISEMENT

ತುರ್ತು ವಿಮಾನ ಪ್ರಯಾಣದ ಕಾರಣ ಶೆಟ್ಟರ್ ಭೇಟಿ ಸಾಧ್ಯವಾಗಲಿಲ್ಲ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 16:35 IST
Last Updated 29 ಜುಲೈ 2021, 16:35 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಜತೆ ಈಗಷ್ಟೇ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬಂದ ಬಳಿಕ ಚರ್ಚೆ ನಡೆಸುವೆ. ಇಂದು ಅವರ ಮನೆಗೆ ಭೇಟಿ ನೀಡಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಬೆಂಗಳೂರಿಗೆ 9 ಗಂಟೆಗೆ ವಿಮಾನ ಪ್ರಯಾಣ ಕೈಗೊಳ್ಳಬೇಕಾಗಿದ್ದರಿಂದ ಭೇಟಿ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಾಭಿಮಾನ ಮತ್ತು ನೈತಿಕತೆ ಬಿಟ್ಟು ಹೇಗೆ ಸಂಪುಟ ಸೇರಲಿ ಎಂದು ಶಾಸಕ ಶೆಟ್ಟರ್ ಅವರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.

ಶೆಟ್ಟರ್ ಹಿರಿಯರು. ಅಸಮಾಧಾನ ಸಹಜ. ಹಾಗಾಗಿ, ಅವರನ್ನು ಭೇಟಿ ಮಾಡಿ ಚರ್ಚಿಸುವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.