ಹುಬ್ಬಳ್ಳಿ: ನಗರದಲ್ಲಿ ಗುರುವಾರದಿಂದ ಎರಡು ದಿನ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಇಲ್ಲಿಗೆ ಬಂದಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಕೆ.ಎಚ್. ಮುನಿಯಪ್ಪ ಬಂದಿದ್ದಾರೆ.
ನಾಯಕರನ್ನು ಸ್ವಾಗತಿಸಲು ಕಾರ್ಯಕರ್ತರು ಗೋಕುಲ ರಸ್ತೆಯುದ್ದಕ್ಕೂ ಕಾರ್ಯಕರ್ತರು ಬೈಕ್ ಜಾಥಾ ಹಮ್ಮಿಕೊಂಡಿದ್ದಾರೆ. ಜೆಸಿಬಿ ಮೂಲಕ ಹೂವಿನ ಹಾರ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಸಂಜೆ ಹಾಗೂ ನಾಳೆ ಸಭೆ ಜರುಗಲಿದೆ.
ಇದನ್ನೂ ಓದಿ... ‘ನಾನೂ ಸಚಿವಾಕಾಂಕ್ಷಿ’; ಸಚಿವ ಸ್ಥಾನಕ್ಕೆ ಸೋಮಶೇಖರರೆಡ್ಡಿ ಲಾಬಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.