
ಪ್ರಜಾವಾಣಿ ವಾರ್ತೆ
ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ ಕೌಶಲಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ಸಿ, ಎಸ್ಟಿ ಸಮುದಾಯದವರು ಅರ್ಜಿ ಸಲ್ಲಿಸಬಹುದು.
ತರಬೇತಿ ಪೂರ್ಣಗೊಳಿಸಿದವರಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ₹ 5 ಲಕ್ಷ ಸಹಾಯ ಧನ ಒದಗಿಸಲಾಗುವುದು. 10ನೇ ತರಗತಿ ಉತ್ತೀರ್ಣರಾದವರು (20 ರಿಂದ 55 ವರ್ಷ ವಯೋಮಿತಿ) ಮಾರ್ಚ್ 13 ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ದೂ:0836 2744522, 2955522 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.