ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಕೆಎಂಸಿಆರ್ಐ) ಪ್ರಭಾರ ನಿರ್ದೇಶಕರಾಗಿ ಡಾ.ಈಶ್ವರ ಹೊಸಮನಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ಅವರ ಸ್ಥಾನಕ್ಕೆ ಈಶ್ವರ ಹೊಸಮನಿ ಅವರನ್ನು ಸರ್ಕಾರ ನೇಮಿಸಿದೆ. ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಅವರು, ಕೆಎಂಸಿಆರ್ಐ ಪ್ರಭಾರ ಪ್ರಾಂಶುಪಾಲರಾಗಿಯೂ ಕಾರ್ಯನಿರ್ವಹಿಸುವರು. ಇದೇ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಹಾಗೂ ಎಂ.ಎಸ್ ವ್ಯಾಸಂಗ ಪೂರ್ಣಗೊಳಿಸಿರುವ ಅವರು, 2006ರಿಂದ ಪ್ರಾಧ್ಯಾಪಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.