ಹುಬ್ಬಳ್ಳಿ: ಮಂಟೂರು ರಸ್ತೆಯಲ್ಲಿ ಭಾನುವಾರ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದ್ದು, ಕೆಲ ಸಮಯದಲ್ಲಿಯೇ ಬೆಂಡಿಗೇರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಗಳ ಬಿಡಿಸಲು ಹೋದಾಗ ಮಾತಿಗೆ ಮಾತು ಬೆಳೆದು ಡೇವಿಡ್ ಎಂಬುವವರಿಗೆ ವಿಜಯ ಯಮನೂರಿ ದೇವರಮನಿ ಎಂಬಾತ ಚಾಕು ಇರಿದು ಪರಾರಿಯಾಗುತ್ತಿದ್ದ. ಆ ವೇಳೆ ಆತನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ಡೇವಿಡ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆನ್ನಟ್ಟಿದ ಪೊಲೀಸರು: ಜಿಲ್ಲೆಯಲ್ಲಿ ಕಟ್ಟಿನಿಟ್ಟಿನ ಲಾಕ್ಡೌನ್ ಜಾರಿಯಲ್ಲಿದ್ದರೂ ಮಾಸ್ಕ್ ಧರಿಸದೇ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಚನ್ನಮ್ಮ ವೃತ್ತದಲ್ಲಿ ಪೊಲೀಸರು ವಿಚಾರಣೆ ನಡೆಸಲು ಮುಂದಾದಾಗ ಆ ವ್ಯಕ್ತಿ ಕಾರು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದ. ಬಳಿಕ ಪೊಲೀಸರು ಸಾಯಿ ಬಾಬಾ ದೇವಸ್ಥಾನದ ತನಕ ಬೆನ್ನು ಹತ್ತಿ ಆತನನ್ನು ಹಿಡಿದು ವಿಚಾರಣೆ ಮಾಡಿದರು.
ಎರಡು ಗಂಟೆಗಳ ಕಾಲ ಕಾರನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದ ಪೊಲೀಸರು ಬಳಿಕ ದಂಡ ಕಟ್ಟಿ ಹೋಗಲು ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.