ಹುಬ್ಬಳ್ಳಿ: ‘ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಸುಗಮವಾಗಿ ಅಧಿಕಾರಾವಧಿ ಪೂರ್ಣಗೊಳಿಸಲಿದೆ. ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಗಳು ಎದುರಾಗದು’ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಸದ್ಯದ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ. ಸಚಿವ ಸ್ಥಾನಕ್ಕೆ ಯಾರೇ ಒತ್ತಾಯಿಸಿದರೂ ಸರ್ಕಾರಕ್ಕೆ ಯಾವ ತೊಂದರೆಯೂ ಇಲ್ಲ. ಯಡಿಯೂರಪ್ಪ ಅವರ ಮುಂದಾಳತ್ವದ ಸರ್ಕಾರ ಯುಗಾದಿವರೆಗೆ ಸುಸೂತ್ರವಾಗಿ ನಡೆಯಲಿದೆ. ಅದರ ನಂತರ ಏನಾಗಲಿದೆ ಎಂದು ಮತ್ತೆ ತಿಳಿಸುತ್ತೇನೆ’ ಎಂದರು.
‘ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಮಳೆಯಾಗುವ ಸೂಚನೆಯಿದೆ. ಬೆಂಕಿಯ ಅವಘಡಗಳು ಸಂಭವಿಸಲಿದೆ. ಜಲಕಂಟಕ ಎದುರಾಗಲಿದೆ. ಹೊಸ ರೋಗಗಳು ಕಾಣಿಸಿಕೊಳ್ಳಲಿದೆ’ ಎಂದು ಹೇಳಿದರು.
ರಾಮ ಮಂದಿರ ನಿರ್ಮಾಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ದೇಶ ಆಳುವ ರಾಜನ ಕರ್ತವ್ಯ. ಬಹುಸಂಖ್ಯಾತರ ಅಪೇಕ್ಷೆ ಕೂಡ ಅದೇ ಆಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.