ಅಣ್ಣಿಗೇರಿ: ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆಪ್ರದೀಪ ಲೆಂಕನಗೌಡ್ರ ರಾಜೀನಾಮೆ ಸಲ್ಲಿಸಿದ್ದಾರೆ.
‘9 ವರ್ಷಗಳಿಂದ ಜೆಡಿಎಸ್ನಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪ್ರಚಾರ ಸಮಿತಿ ಅಧ್ಯಕ್ಷ, ಧಾರವಾಡ ಜಿಲ್ಲಾ ಘಟಕದ ವಕ್ತಾರನಾಗಿ ಹಲವು ಜವಾಬ್ದಾರಿಗಳನ್ನು ಪಕ್ಷ ವಹಿಸಿತ್ತು. ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರು ಈಚೆಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡ ಕಾರಣ ಅವರ ಬೆಂಬಲಿಗನಾದ ನಾನೂ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದೇನೆ’ ಎಂದು ಲೆಂಕನಗೌಡ್ರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ಅಂಚೆ ಮೂಲಕ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಕಳುಹಿಸಲಾಗುವುದು’ ಎಂ ದರು.
ಎಸ್.ಡಿ.ಸುಂಕದ, ಕುಮಾರ ಅಂಗಡಿ, ನಿಂಗನಗೌಡ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.