ADVERTISEMENT

ಶಿಕ್ಷಣ ನೀತಿ ಮುಕ್ತ ಚರ್ಚೆ ನಡೆಯಲಿ: ಮಹ್ಮದ್ ಪೀರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 12:18 IST
Last Updated 19 ಸೆಪ್ಟೆಂಬರ್ 2020, 12:18 IST

ಹುಬ್ಬಳ್ಳಿ: ‘ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನುವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಒಳಪಡಿಸಬೇಕು’ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‍ನ (ಎಸ್ಐಒ) ಸಂಘಟನೆಯ ಮುಖ್ಯಸ್ಥ ಮಹ್ಮದ್ ಪೀರ್ ಆಗ್ರಹಿಸಿದರು.

‘ಶಿಕ್ಷಣ ನೀತಿಯ ಬಗ್ಗೆ ಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಜಾರಿಗೆ ತರಲು ಬಿಜೆಪಿ ಸರ್ಕಾರ ಮುಂದಾಗಿದೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠೀಯಲ್ಲಿ ಆತಂಕ ವ್ಯಕ್ತಪಡಿಸಿದರು.

‘ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿವೆ. ಅವುಗಳನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದೆ ಎಂದು ಕೆಲ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಅಬ್ದುಲ್ ಸಲಾಂ ಮತ್ತು ಸಮೀರ್ ಮಾಣಿಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.