– ಪ್ರಜಾವಾಣಿ ಚಿತ್ರ
ಧಾರವಾಡ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರದಿಂದ ಸೆ.7ರವರೆಗೆ ರಾತ್ರಿ 11.59ರಿಂದ ಬೆಳಿಗ್ಗೆ 6 ಗಂಟೆಯವರೆಗೆ (ಹುಬ್ಬಳ್ಳಿ–ಧಾರವಾಡ ಹೊರತು ಪಡಿಸಿ) ಜಿಲ್ಲೆಯಾದ್ಯಂತ ಮದ್ಯ ಸಾಗಣೆ ಮತ್ತು ಮಾರಾಟ ನಿಷೇಧಿಸಲಾಗಿದೆ.
ಧಾರವಾಡ ಅಬಕಾರಿ ಉಪ ಆಯುಕ್ತರು, ಧಾರವಾಡ ಆರಕ್ಷಕ ಅಧೀಕ್ಷಕರು, ಧಾರವಾಡ ಜಿಲ್ಲೆಯ ಹೆಚ್ಚುವರಿ ಅಬಕಾರಿ ವರಿಷ್ಠಾಧಿಕಾರಿ ಮತ್ತು ಹುಬ್ಬಳ್ಳಿ ಅಬಕಾರಿ ಉಪ ವರಿಷ್ಠಾಧಿಕಾರಿ (ವಿಚಕ್ಷಕ ದಳ) ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.