ADVERTISEMENT

ಹುಬ್ಬಳ್ಳಿ: ಜೋಶಿ ಪರ ಟೆಂಗಿನಕಾಯಿ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 15:50 IST
Last Updated 23 ಏಪ್ರಿಲ್ 2024, 15:50 IST

ಹುಬ್ಬಳ್ಳಿ: ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 41ರ ವಿಶ್ವೇಶ್ವರ ನಗರ ಹಾಗೂ ಆದರ್ಶ ನಗರದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆ ನಡೆಯಿತು.

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ವೀರಣ್ಣ ಸವಡಿ ಜೋಶಿ ಪರ ಮತಯಾಚಿಸಿದರು.

 ಮಹೇಶ ಟೆಂಗಿನಕಾಯಿ ಮಾತನಾಡಿ, ಪ್ರಲ್ಹಾದ ಜೋಶಿ ಅವರು ಕೇಂದ್ರದಿಂದ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು. ಮತದಾನ ದಿನದಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.