ADVERTISEMENT

ಮನೆಮನೆಯಲ್ಲಿ ತ್ರಿವರ್ಣ ಯಶಸ್ವಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 15:40 IST
Last Updated 8 ಆಗಸ್ಟ್ 2022, 15:40 IST
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಧಾರವಾಡ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನಕುಮಾರ ಮಾತನಾಡಿದರು
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಧಾರವಾಡ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನಕುಮಾರ ಮಾತನಾಡಿದರು   

ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಆಗಸ್ಟ್13ರಿಂದ 15ರವರೆಗೆ ಮನೆಮನೆಯಲ್ಲಿ ತ್ರಿವರ್ಣ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕು. ಬೂತ್, ಮಂಡಲ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಪದಾಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನಕುಮಾರ ಸಲಹೆ ನೀಡಿದರು.

ದೇಶಪಾಂಡೆ ನಗರದ ಶ್ರೀ ಕೃಷ್ಣಾ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಅಭಿಯಾನದ ಅಂಗವಾಗಿ ಶಾಲಾ ಮಕ್ಕಳನ್ನೊಳಗೊಂಡ ಪಥಸಂಚಲನ ನಡೆಸುವುದು, ಸಾರ್ವಜನಿಕ ಸ್ಥಳಗಳ ಬದಲು ಮನೆ ಮೇಲೆ ಧ್ವಜವನ್ನು ಹಾರಿಸುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದರು.

ಧಾರವಾಡ ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ, ಪಕ್ಷದ ಮಹಾನಗರ ಜಿಲ್ಲಾ ಅಧ್ಯಕ್ಷ ಸಂಜಯ ಕಪಟಕರ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಮುಖಂಡರಾದ ನಾರಾಯಣ ಜರತಾರಘರ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ಸಂತೋಷ ಚವ್ಹಾಣ, ಪ್ರಭು ನವಲಗುದಮಂಠ, ಬಸವರಾಜ ಗರಗ, ಸುನೀಲ ಮೋರೆ, ಸಿದ್ದು ಮೊಗಲಿಶೆಟ್ಟರ, ರವಿ ನಾಯಕ, ಶಿವಾನಂದ ಗುಂದಗೋವಿ, ಸದಾನಂದ ಚಿಂತಾಮಣಿ, ಮಾಲತೇಶ ಶ್ಯಾಗೋಟಿ, ಕೃಷ್ಣಾ ಗಂಡಗಾಳೇಕರ, ರೂಪಾ ಶೆಟ್ಟಿ, ವಿಜಯಲಕ್ಷ್ಮೀ ತಿಮ್ಮೊಲಿ, ಸೀಮಾ ಲದವಾ, ಪೂರ್ಣಿಮಾ ಶಿಂಧೆ, ರಾಜೇಶ ಕೋಟ್ಯಾನವರ, ಸುರೇಶ ಜಾಧವ, ಹನಮಂತ ಹರಿವಾಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.