ಧಾರವಾಡ: ಪ್ರತಿಷ್ಠಿತ ಕೆಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧವಾಗಿ ಆಯ್ಕೆಯಾದರು.
ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಶುಕ್ರವಾರ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಂ.ಬಿ.ಪೂಜಾರ ಅವರು ಹೊರಕೇರಿ ಅವರ ಅವಿರೋಧವಾಗಿ ಆಯ್ಕೆಯನ್ನು ಘೋಷಿಸಿದರು.
ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಬಾಪುಗೌಡ ಪಾಟೀಲ ರಾಜೀನಾಮೆ ನೀಡಿದ್ದರಿಂದ ಹೊಸ ಅಯ್ಕೆ ಪ್ರಕ್ರಿಯೆ ಶುಕ್ರವಾರ ಜರುಗಿತು. ಬದಲಾದ ರಾಜಕೀಯ ಬೆಳವಣಿಯಲ್ಲಿ ಬಿಜೆಪಿ ಬೆಂಬಲಿತ ಮಲ್ಲಿಕಾರ್ಜುನ ಹೊರಕೇರಿ ಅವರು ಅಧ್ಯಕ್ಷ ಗಾದಿಗೇರುವುದು ನಿಶ್ಚಿತವಾಗಿತ್ತು.
ಮಲ್ಲಿಕಾರ್ಜುನ ಅವರು ಅಮರಗೋಳ ಕ್ಷೇತ್ರದ ಪಾಲಿಕೆ ಸದಸ್ಯರಾಗಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದ ಅವರು ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದರು.
ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರಾದ ಗಂಗಾಧರ ಸಾತಣ್ಣವರ, ಶಿವಕುಮಾರಗೌಡ ಪಾಟೀಲ, ಮಂಜುನಾಥ ಮುರಳ್ಳಿ, ಜಿ.ಪಿ.ಪಾಟೀಲ ಇನ್ನಿತರರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.